DELHI VARTHE
News

visit and solace

12th December 2024

ಮೃತ ಬಾಣಂತಿಯ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷಿö್ಮ ಚೌಧರಿ ಭೇಟಿ, ಸಾಂತ್ವನ


News

health camp

5th December 2024

ಕಟ್ಟೆಮನೆ ನಾಗೇಂದ್ರ ನೇತೃತ್ವದಲ್ಲಿ ಸೂರ್ಯನಾರಾಯಣ ರೆಡ್ಡಿ ಹುಟ್ಟು ಹಬ್ಬ ಅಧ್ದೂರಿ ಆಚರಣೆ

      ಅನ್ನದಾನ ಕಾರ್ಯಕ್ರಮ,ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ


ಬಳ್ಳಾರಿ ಡಿ ೦೫. ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ೭೧ ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಎಪಿಎಂಸಿಯಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ ನೇತೃತ್ವದಲ್ಲಿ ಹುಟ್ಟುಹಬ್ಬವನ್ನು ಕೇಕ್ ಕಟ್‌ಮಾಡುವುದರ ಮೂಲಕ ಅಧ್ದೂರಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಿ ೦೫ ರಂದು ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫ ಗಂಟೆಯ ವರೆಗೆ ಎಪಿಎಂಸಿ ಆವರಣದಲ್ಲಿ ಐದು ನೂರಕ್ಕೂ ಹೆಚ್ಚಿನ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಯ್ತು. ನಂತರ ಬಿಮ್ಸ್ ಆಸ್ಪತ್ರೆಗೆ ತೆರಳಿ ಅಲ್ಲಿನ ರೋಗಿಗಳ ಸಂಬoಧಿಕರಿಗೆ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡ ಬಿ.ರಾಂಪ್ರಸಾದ್, ಎಪಿಎಂಸಿ ಉಪಾಧ್ಯಕ್ಷ ರಾಮಣ್ಣ, ಸದಸ್ಯರು, ಮುಖಂಡರುಗಳಾದ ಅಬ್ದುಲ್ ಬಾರಿ, ವೆಂಕಟನಾಯ್ಡು, ತನ್ವೀರ್, ಕೇಶವ, ಯಲ್ಲಪ್ಪ, ಪ್ರಭಾಕರ್ ರೆಡ್ಡಿ, ಅಂಜೀರ್, ಅಬ್ದುಲ್, ಸಮೀರ್ ಬಾಷ,ಅಕ್ಕಿಶಿವಕುಮಾರ್, ವಿಶ್ವನಾಥ ಇನ್ನಿತರರು ಉಪಸ್ಥಿತರಿದ್ದರು.