
12th February 2025
ಜಮಖಂಡಿ: ಕ್ಷೇತ್ರದ ಗ್ರಾಮೀಣ ರಸ್ತೆಗಳ ಸುಧಾರಣೆ, ನಗರ ಪ್ರದೇಶದಲ್ಲಿನ ಒಳಚರಂಡಿ, ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಾಗಿ ಸಂಬಂದಪಟ್ಟ ಇಲಾಖೆಯ ಸಚಿವರೊಂದಿ ಚರ್ಚಿಸಿ ಅಂದಾಜು 25ಕೋಟಿಗೂ ಅಧಿಕ ವೆಚ್ಚದ ಅನುದಾನ ವಿವಿಧ ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಗಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ನಗರದ ಸಜ್ಜಿ ಹನುಮಾನ ದೇವಸ್ಥಾನದ ಹತ್ತಿರ ಲೋಕೋಪಯೋಗಿ ಇಲಾಖೆಯ 2024-25ನೇ ಸಾಲಿನ ಎಸ್.ಎಚ್.ಡಿ.ಪಿ5ರ ಒಂದನೇ ಹಂತದ ಕಾಮಗಾರಿ ನಗರದ ಎಸ್.ಆರ್.ಎ ಕ್ಲಬ್ ದಿಂದ ಚನ್ನಮ್ಮ ವೃತ್ತದವರೆಗೆ ಅಂದಾಜು 824ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಬಹುಮುಖ್ಯ ಅಭಿವೃದ್ಧಿ ಕಾಮಗಾರಿಗಳನ್ನು ಮುತವರ್ಜಿವಹಿಸಿ ಸರಕಾರದ ಮಟ್ಟದಲ್ಲಿ ಮಾತನಾಡಿ ಹಲವು ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಗಿದೆ. ಮುಂಬರುವ ದಿನಗಳಲ್ಲಿ ಹಲವಾರು ಕಾಮಗಾರಿಗಳ ಯೋಜನೆ ರೂಪಿಸಲಾಗಿದ್ದು ಅವುಗಳನ್ನು ಕಾರ್ಯರೂಪಕ್ಕೆ ತರಲಾಗುವದು ಎಂದರು.
ಅಭಿವೃದ್ಧಿ ಕಾಮಗಾರಿಗಳು ಪುರ್ಣಗೊಳ್ಳಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಮುಲ್ಯವಾಗಿದೆ. ಈ ರಸ್ತೆ ಕಾಮಗಾರಿಯು ತ್ವರಿತ ಗತಿಯಲ್ಲಿ ನಡೆಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವದು ಎಂದರು.
ಕಡಿಮೆ ಅವಧಿಯಲ್ಲಿ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಬೇಕು ಎಮದು ಗುತ್ತಿಗೆದಾರ ಎಮ್.ಎಲ್. ಲಮಾಣಿ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಬೆ ಅಧ್ಯಕ್ಷ ಪರಮಾನಂದ ಗವರೋಜಿ, ಪಿಡಬ್ಲೂಡಿ ಎಇಇ ಎಸ್.ಆರ್. ಬಂಡಿವಡ್ಡರ, ನಗರಸಭೆ ಪೌರಾಯುಕ್ತ ಜ್ಯೋತಿಗಿರೀಶ, ಹೆಸ್ಕಾಂ ಎಇಇ ವಿಶಾಲ ಧರೆಪ್ಪಗೋಳ, ಜಿಎಲ್ಬಿಸಿ ಎಇಇ ನಾಯ್ಕ, ನಾಗಪ್ಪ ಸನದಿ, ಮಲ್ಲು ದಾನಗೌಡ, ಎಂ.ಬಿ. ನ್ಯಾಮಗೌಡ, ಈಶ್ವರ ಆದೆಪ್ಪನವರ, ಶಂಕರ ಕಾಳೆ, ಸುರೇಶಗೌಡ ಪಾಟೀಲ, ರಾಜುಗೌಡ ಪಾಟೀಲ, ಧರೆಪ್ಪ ಗುಗ್ಗರಿ, ಅರವಿಂದಗೌಡ ಪಾಟೀಲ, ಸಂಗು ದಳವಾಯಿ, ವಿಠ್ಠಲ ಹಾಲಗೊಂಡ, ರಮೇಶ ಆಲಬಾಳ, ಶ್ರೀಧರ ಕಂಬಿ ಇತರರು ಇದ್ದರು.
12th February 2025
ಜಮಖಂಡಿ : ಆರೋಗ್ಯವಾಗಿದ್ದರೆ, ಸುಖವಾಗಿ ಬಾಳಬಹುದು, ಆದ್ದರಿಂದ ರೋಗದ ಲಕ್ಷಣ ಕಾಣುವ ಮುನ್ನವೇ ಆಗ್ಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಪಾಲಿಸಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು.
ನಗರದ ಸಾನಿಯಾ ಮೆಡಿಕಲ್, ನ್ಯಾಮಗೌಡ ಪಾಲಿಕ್ಲಿನಿಕ್, ಬಿಎಲ್ಡಿಇ ನರ್ಸಿಂಗ್ ಕಾಲೇಜ ಆಶ್ರಯದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷದ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಶಿಬಿರಗಳಿಂದ ಬಡವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಶಿಬಿರಗಳು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಆಯೋಜಿಸಬೇಕು ಎಂದು ತಿಳಿಸಿದರು.
400ಕ್ಕೂ ಹೆಚ್ಚು ರೋಗಿಗಳ ಆರೋಗ್ಯ ತಪಾಸಣೆಯನ್ನು ಖ್ಯಾತ ವೈದ್ಯರಾದ ಡಾ.ಶ್ರೀಶೈಲ ಅಂಜುಟಗಿ, ಡಾ.ವಿಶ್ವನಾಥ ಆಲಮೇಲ, ಡಾ.ಪವನ ಬಳ್ಳೂರ, ಡಾ.ಸಂಗಮೇಶ ನ್ಯಾಮಗೌಡ, ಡಾ.ಶಿವಲೀಲಾ ನ್ಯಾಮಗೌಡ ನಡೆಸಿದರು.
ಉಚಿತವಾಗಿ ಔಷಧಿಯನ್ನು ಸಾನಿಯಾ ಮೆಡಿಕಲ್ ವತಿಯಿಂದ ವಿತರಿಸಿದರು.
ಈ ವೇಳೆ ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ, ಮೀರಾಸಾಬ ಒಂಟಮೂರಿ, ಮಲ್ಲು ಗಣಾಚಾರಿ, ಅಕ್ಬರ ಜಮಾದಾರ, ಅಯ್ಯೂಬ ಧನ್ನೂರ ಇತರರು ಇದ್ದರು.
22nd January 2025
ಜಮಖಂಡಿ : ನಗರ ಅಭಿವೃದ್ದಿಗೆ ಸಭೆಯು ಅರ್ಥಪೂರ್ಣವಾಗಿ ನಡೆಯಬೇಕು, ಇಲ್ಲಿನ ಒಂದೊಂದು ನಿಮಿಷ ಅತ್ಯಮೂಲ್ಯವಾಗಿದೆ, ಅಭಿವೃದ್ಧಿಗೆ ನಾವೆಲ್ಲರೂ ಒಂದೆಯಾಗಿರಬೇಕು, ಪಕ್ಷಬೇದ ಇಲ್ಲಿರಬಾರದು, ನಗರದಲ್ಲಿ ಜನ ಮತ್ತು ವಾಹನ ದಟ್ಟನೆ ದಿನದಿಂದ ದಿನಕ್ಕೆ ಬಹಳಷ್ಟು ಹೆಚ್ಚಾಗುತ್ತಿದೆ, ಮಹಾರಾಜರ ಕಾಲದಿಂದಲೂ ಒಳಚರಂಡಿ ವ್ಯವಸ್ಥೆ ಇಲ್ಲಿಯವರೆಗೂ ಹಾಗೆ ಇರುವದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಇದಕ್ಕೆ ಪರ್ಯಾಯವಾಗಿ ಹೊಸ ಜಮಖಂಡಿ ನಿರ್ಮಿಸುವ ನಿಟ್ಟಿನಲ್ಲಿ ಒಂದು ವಿಶೇಷ ಯೋಜನೆ ಹಾಕಿಕೊಂಡಿದ್ದೆನೆ ಈಗಾಗಲೇ ನಾನು ಕಂದಾಯ ಸಚಿವರನ್ನು, ಡಿಸಿಎಂ ಅವರನ್ನು ಭೆಟ್ಟಿ ಯಾಗಿ ಚರ್ಚಿಸಿದ್ದೆನೆ ಅದಕ್ಕೆ ಅವರು ಸಕಾರಾತ್ಮವಾಗಿ ಸ್ಪಂದಿಸಿದ್ದಾರೆ ಕೆಲಸ ಆಗುವ ಮುಂಚೆ ಮಾತನಾಡಬಾರದು ನಮ್ಮ ಕೆಲಸಗಳೆ ಮಾತನಾಡಬೇಕು ಎಂದು ಶಾಸಕ ನಾಡೋಜ ಜಗದೀಶ ಗುಡಗುಂಟಿ ಹೇಳಿದರು.
ನಗರದಲ್ಲಿನ ಬಿಡಾಡಿ ದನಗಳಿಂದ ಸಾವು ನೋವುಗಳಾಗುತ್ತಿವೆ ಅವುಗಳನ್ನು ಗೋ ಶಾಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿ, ಇಲ್ಲ ಬಿಡಾಡಿ ದನಗಳ ಮಾಲಿಕರಿಗೆ ಕಟ್ಟುನಿಟ್ಟಾಗಿ ವಾರ್ನಿಂಗ್ ನೀಡಿ, ದಂಡ ಕಟ್ಟಿ ಅವರಿಗೆ ಮನವರಿಕೆ ಮಾಡಿ ಇದರಿಂದ ಸಮಸ್ಯೆ ಬಹಳಷ್ಟು ಕಡಿಮೆಯಾಗುತ್ತದೆ ಎಂದು ಶಾಸಕರು ಸೂಚಿಸಿದರು.
ನಗರ ಪ್ರದೇಶದಲ್ಲಿನ ರಸ್ತೆ ಸೇರಿದಂತೆ ಒತ್ತುವರಿ ಪ್ರದೇಶಗಳನ್ನು ತೆರವುಗೊಳಿಸುವುದಕ್ಕೆ ಎಲ್ಲ ಸದಸ್ಯರು ಒಕ್ಕೂರಲವಾಗಿ ಸಮ್ಮತಿಸಿದರು.
ಪೌರಾಯುಕ್ತ ಜ್ಯೋತಿ ಗಿರೀಶ ಮಾತನಾಡಿ, ಹಳೆಯದಾದ ನಗರಸಭೆ ಕಟ್ಟಡವನ್ನು ಮರು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರಪೋಸಲ್ ಕಳುಹಿಸಲಾಗಿದೆ ಎಂದರು.
ನಗರದಲ್ಲಿ ಬಿದಿ ನಾಯಿಗಳ ಸಂತತಿ, ಉಪಟಳ ಬಹಳಷ್ಟಾಗುತ್ತಿದೆ ಕೂಡಲೆ ಅವುಗಳ ನಿಯಂತ್ರಣ ಮಾಡಬೇಕು ಎಂದು ಸಂತಾಣ ಹರಣ ಶಸ್ತ್ರ ಚಿಕಿತ್ಸೆ ಮಾಡಿಸಲಾಗುವುದು ಈ ಕುರಿತು ಬೆಂಗಳೂರಿನ ಕಂಪನಿಯೊಂದಿಗೆ ಟೆಂಡರ್ ಪ್ರಕ್ರೀಯೇಯಾಗಿದೆ ಎಂದು ಪೌರಾಯುಕ್ತ ತಿಳಿಸಿದರು.
ನಗರದಲ್ಲಿನ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸಲಾಗುವುದು, ನಗರಸಭೆ ವ್ಯಾಪ್ತಿಯಲ್ಲೆ ಇರುವ ಇಂಡಸ್ಟ್ರಿಯಲ್ ಏರಿಯಾ ರಾಮ್ ಭಾಗವನ್ನು ನಗರಸಭೆಗೆ ಸೆರ್ಪಡೆ ಮಾಡಿಕೊಳ್ಳಲಾಗುವುದು ಇದರಿಂದ ಟ್ಯಾಕ್ಸ್ ಆದಾಯ ಬರುತ್ತದೆ ಎಂದರು.
ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ, ಉಪಾಧ್ಯಕ್ಷೆ ರೇಖಾ ಕಾಂಬಳೆ ಇದ್ದರು.