
30th August 2024
ಜಮಖಂಡಿ: ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಅವಹೇಳನಾಕಾರ ಹೇಳಿಕೆ ನೀಡಿರುವ ಮಹಾರಾಷ್ಟ್ರದ ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿವಿಧ ಮುಸ್ಲಿಂಪರ ಸಂಘಟನೆಗಳಿಂದ ಶುಕ್ರವಾರ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಗ್ರೇಡ್2 ತಹಶೀಲ್ದಾರ ಕೆ.ವಾಯ್.ಬಿದರಿ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮೌಲಾನಾ ಅಲ್ತಾಫಖಾನ ಮದನಿ ಮಾತನಾಡಿ, ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರ ಅವರ ಕುರಿತು ಮಹಾಂತ ರಾಮಗಿರಿ ಮಹಾರಾಜರು ನೀಡಿರುವ ಅವಹೇಳನಕಾರಿ ಹೇಳಿಕೆಗಳನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವರ ಕುರಿತಾಗಿ ರಾಮಗಿರಿ ಮಹಾರಾಜ ಅವಹೇಳನಕಾರಿ ಭಾಷಣ ಮಾಡಿದ್ದು, ಈ ಸ್ವಾಮೀಜಿ ಮೇಲೆ ಕಾನೂನು ರೀತಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಭಾರತದ ಸಂವಿಧಾನವು ಎಲ್ಲ ಧರ್ಮದ ಸಮಾಜ ಬಂಧುಗಳಿಗೆ ಸಮಾನ ರೀತಿಯಲ್ಲಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದ್ದರೂ ಮಹಾಂತ ರಾಮಗಿರಿ ಮಹಾರಾಜ ಪ್ರವಾದಿ ಹಜರತ್ ಮೊಹಮ್ಮದ್ ಪೈಗಂಬರರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವುದು ಇಸ್ಲಾಂ ಸಮಾಜದ ಬಾಂಧವರಿಗೆ ತೀವ್ರ ನೋವನ್ನುಂಟಾಗುವದಲ್ಲದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಇಂತಹ ಸ್ವಾಮೀಜಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮೌಲಾನಾ ಇಸಾ ಇನಾಮದಾರ, ಮೌಲಾನಾ ಅನೀಸ್ ಡಾಂಗೆ, ಮೌಲಾನಾ ಮುಫ್ತಿ ಹಾರೂನ, ಮೌಲಾನಾ ಫಾರೂಕ್, ಮೌಲಾನಾ ಮುಜಮ್ಮೀಲ ಶೆಖ, ಮೌಲಾನಾ ಅಲ್ತಾಫಖಾನ ಮದನಿ, ಮೌಲಾನಾ ಸರ್ಫರಾಜ, ರಾಜೆಸಾಬ ತಾಳಿಕೋಟಿ, ಖೀಜರ ಪೆಂಡಾರಿ, ಖಾಜಾಆಮೀನ ಕಂಕಣಪೀರ, ರಫೀಕ ಕಲಾದಗಿ, ಝಾಕೀರಹುಸೇನ್ ನಧಾಪ, ಅಬ್ದುಲ ಜಮಾದಾರ, ಸಮೀರ ಕಂಗನೋಳ್ಳಿ, ಅನ್ವರ ಮೋಮಿನ, ಮುಬಾರಕ ಅಪರಾದ, ನಸರೋದ್ದಿನ ಜಮಾದಾರ, ಉಸ್ಮಾನಸಾಬ ದಿಲಾವರ, ಮಕ್ಬೂಲ್ ಅಥಣಿಕರ, ಗುಡುಸಾಬ ಹೊನವಾಡ, ರಾಜು ಮಸಳಿ, ಮುಸ್ತಾಕ ಝೆಂಡೆ, ಅಯ್ಯುಬ ಗದಗ, ಅಸ್ಗರಅಲಿ ಝೆಂಡೆ ಇತರರು ಇದ್ದರು.
22nd August 2024
ಜಮಖಂಡಿ : ಪಿಎಂ. ಸ್ವ-ನಿಧಿ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆಗೆ "Best Performing ULB-in Loan performance at State Level” ಪ್ರಶಸ್ತಿಯನ್ನು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಪೌರಾಯುಕ್ತ ಜ್ಯೋತಿ ಗಿರೀಶ್.ಎಸ್ ಅವರಿಗೆ ನೀಡಿದರು.
ಕರ್ನಾಟಕ ರಾಜ್ಯದಲ್ಲಿ ಪಿಎಂ ಸ್ವ-ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವ ನಗರಸ್ಥಳೀಯ ಸಂಸ್ಥೆಗಳಿಗೆ ಸಂಬ0ಧಿಸಿದ0ತೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಆಯೋಜಿಸಿದ್ದರು.
ಜಮಖಂಡಿ ನಗರಸಭೆಯಲ್ಲಿ ಈ ಯೋಜನೆಯನ್ನು ಯಶಸ್ವಿಗೊಳಿಸಲು ಸಮುದಾಯ ಸಂಘಟಕರಾದ ರುಪೇಶ ಘಾಟಗೆ ಶ್ರಮಿಸಿದ್ದರು.
16th August 2024
ಜಮಖಂಡಿ: ಆ.16 : ಇಲ್ಲಿನ ನಗರಸಭೆ ನೂತನ ಅಧ್ಯಕ್ಷರಾಗಿ ಪರಮಗೊಂಡ ಗವರೋಜಿ ಹಾಗೂ ಉಪಾಧ್ಯಕ್ಷೆಯಾಗಿ ರೇಖಾ ಕಾಂಬಳೆ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.
31 ಸದಸ್ಯರ ಬಲದ ಜಮಖಂಡಿ ನಗರಸಭೆಯಲ್ಲಿ 20 ಕಾಂಗ್ರೆಸ್ ಮತ್ತು ಪಕ್ಷೇತರ ಸದಸ್ಯ, ಒಳಗೊಂಡ 24 ಮತಗಳಿಂದ ಕಾಂಗ್ರೆಸ್ ಸಂಪೂರ್ಣ ಬಹುಮತ ಹೊಂದಿದ್ದ ಕಾರಣ ನಿರೀಕ್ಷೆಯಂತೆಯೇ ಅದೇ ಪಕ್ಷದ ಸದಸ್ಯ ಪರಮಗೊಂಡ ಗವರೋಜಿ ಸುಲಭವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿ ನಗರ ಪ್ರಥಮ ಪ್ರಜೆಯ ಗೌರವಕ್ಕೆ ಪಾತ್ರರಾದರು. ಮತ್ತು ಉಪಾಧ್ಯಕ್ಷೆ ರೇಖಾ ಕಾಂಬಳೆ ಆಯ್ಕೆಯಾದರು.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ 11ರ ಪರಮಗೊಂಡ ಗವರೋಜಿ ಅವರೊಂದಿಗೆ 6ನೇ ವಾರ್ಡಿನ ಬಿಜೆಪಿ ಸದಸ್ಯೆ ಅನುಸುಯಾ ಅಸುಗಡೆ, ಮತ್ತು ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 13ನೇ ವಾರ್ಡಿನ ರೇಖಾ ಕಾಂಬಳೆ ಅವರೊಂದಿಗೆ 30ನೇ ವಾರ್ಡಿನ ಬಿಜೆಪಿಯ ಸದಸ್ಯ ಕುಶಾಲ ವಾಗಮೋರೆ ಕೂಡ ಆಕಾಂಕ್ಷಿಯಾಗಿದ್ದರು.
ನಗರಸಭೆ ಪೌರಾಯುಕ್ತ ಜ್ಯೋತಿ ಗಿರೀಶ್.ಎಸ್ ನೂತನ ಅಧ್ಯಕ್ಷ, ಉಪಾಧ್ಯಕ್ಷೆಯನ್ನು ಅಭಿನಂದಿಸಿ ಸನ್ಮಾನಿಸಲಾಯಿತು.
ಚುನಾವಣೆಯಲ್ಲಿ ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡ, ಶಾಸಕ ಜಗದೀಶ ಗುಡಗುಂಟಿ ಭಾಗಿಯಾಗಿದ್ದರು.
ಚುನಾವಣೆ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಪರಮಗೊಂಡ ಗವರೋಜಿ ಹಾಗೂ ರೇಖಾ ಕಾಂಬಳೆ ಬೆಂಬಲಿಗರು ನಗರಸಭೆ ಆವರಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.