
ಶಾಂತೀಶ್ವರಿ ಸಮೂಹದಿಂದ ಪ್ರಸಾದ ವಿತರಣೆ
13th March 2025

ಬೀದರ. ಮಾ. 12 :- ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಪ್ರಯುಕ್ತ ಶಾಂತೀಶ್ವರಿ ಸಂಸ್ಥೆಗಳ ಸಮೂಹದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಪ್ರಸಾದ ರೂಪದಲ್ಲಿ ಉಪ್ಪಿಟ್ಟು, ಶಿರಾ, ಮಜ್ಜಿಗೆ ಹಾಗೂ ಬಾಳೆಹಣ್ಣು ವಿತರಿಸಲಾಯಿತು.
ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಬಿ. ಪಾಟೀಲ ಪ್ರಸಾದ ವಿತರಣೆಗೆ ಚಾಲನೆ ನೀಡಿದರು. ನೌಬಾದ್ನ ಜ್ಞಾನಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ, ಶಾಂತೀಶ್ವರಿ ಸಮೂಹದ ಮುಖ್ಯಸ್ಥರೂ ಆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ಜಯಂತಿ ಯುಗಮಾನೋತ್ಸವ ಆಚರಣೆ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಸಿದ್ರಾಮಯ್ಯ ಸ್ವಾಮಿ, ಮುಖಂಡರಾದ ರವೀಂದ್ರ ಸ್ವಾಮಿ, ಓಂಪ್ರಕಾಶ್ ರೊಟ್ಟೆ, ವರದಯ್ಯ ಸ್ವಾಮಿ, ಪ್ರವೀಣ್ ಸ್ವಾಮಿ, ನಾಗರಾಜ ಮಠ, ಮಹೇಶ್ ಪಾಟೀಲ, ವಿಘ್ನೇಶ್ ಸ್ವಾಮಿ, ಮಹಾರುದ್ರ ಡಾಕುಳಗಿ, ರಾಕೇಶ್ ಮಠಪತಿ, ನಾಗಯ್ಯ ಸ್ವಾಮಿ, ರೇಣಸಿದ್ದಯ್ಯ ಮಠಪತಿ, ಶಿವಶಂಕರ ಬೆಳಮಗಿ ಮತ್ತಿತರರು ಇದ್ದರು.