
24th February 2025
ಕಲಬುರಗಿ,ಫೆ.೨೨(ಕರ್ನಾಟಕ ವಾರ್ತೆ) ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆಬ್ರವರಿ ೨೪ ರಿಂದ ೧೦ ದಿನಗಳ ಕಾಲ ರಾಷ್ಟ್ರ ಮಟ್ಟದ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುವುದರಿಂದ ೧೦ ದಿನಯುದ್ದಕ್ಕೂ ಸ್ಬಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಶನಿವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಸರಸ್ ಮೇಳ ಸಂಬAಧ ರಚಿಸಲಾಗಿರುವ ವಿವಿಧ ಸಮಿತಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಸ ಸಂಗ್ರಹಣೆಗೆ ಪಾಲಿಕೆ ವತಿಯಿಂದ ಹೆಚ್ಚಿನ ಪೌರಕಾರ್ಮಿಕರನ್ನು ನೇಮಿಸಬೇಕು. ಅಲ್ಲಲ್ಲಿ ಬಯೋ ಟಾಯಲೆಟ್ ವ್ಯವಸ್ಥೆ ಮಾಡಬೇಕು ಎಂದರು.
ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಇದಾಗಿರುವುದರಿಂದ ಮಾರಾಟಕ್ಕೆ ಜನ ಬರ್ತಾರೆ. ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಬೇಕು. ಪ್ರತಿ ದಿನ ಸಂಜೆ ಸಾಂಸ್ಕ್ರತಿಕ ಕಾರ್ಯಕ್ರಮಗಳು ಇರುವುದರಿಂದ ಸಹಜವಾಗಿಯೇ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಪಾರ್ಕಿಂಗ್ ವ್ಯವಸ್ಥೆ ತುಂಬಾ ಅಚ್ಚುಕಟ್ಟಾಗಿ ಮಾಡಬೇಕು. ಸುಗಮ ಸಂಚಾರಕ್ಕೆ ಹೆಚ್ಚಿನ ಟ್ರಾಫಿಕ್ ಸಿಬ್ಬಂದಿ ನಿಯೋಜನೆ ಜೊತೆಗೆ ಜಾತ್ರೆ ಮೈದಾನ ಸುತ್ತ ಸೈನೇಜ್ ಬೋರ್ಡ್ ಅಳವಡಿಸಬೇಕು ಎಂದರು.
ಸಾAಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದ ಜಿಲ್ಲಾಧಿಕಾರಿಗಳು, ಎರಡು ಶಿಪ್ಟ್ ನಲ್ಲಿ ವೈದ್ಯರು ಕೆಲಸ ನಿರ್ವಹಿಸುವಂತೆ ಅಂಬುಲೆನ್ಸ್ ವಾಹನದ ಜೊತೆಗೆ ಒಂದು ವೈದ್ಯಕೀಯ ತಂಡ ಮತ್ತು ಮುಂಜಾಗ್ರತೆಯಾಗಿ ಅಗ್ನಿ ಅವಘಡ ನಿಯಂತ್ರಣಕ್ಕೆ ಅಗ್ನಿಶಾಮಕ ತಂಡ ಸ್ಥಳದಲ್ಲಿ ತೈನಾತಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.
ಬೇಸಿಗೆ ಇರುವ ಕಾರಣ ಕುಡಿಯುವ ನೀರು ನಿರಂತರ ಪೂರೈಸುವ ವ್ಯವಸ್ಥೆ ಆಗಬೇಕು. ವಿವಿಧ ರಾಜ್ಯಗಳಿಂದ ಬರುವ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಊಟದ ವ್ಯವಸ್ಥೆ, ವಸತಿ ಎಲ್ಲವು ಅಚ್ಚುಕಟಾಗಿ ಮಾಡಲು ಪರಸ್ಪರ ಅಧಿಕಾರಿಗಳು ಸಮನ್ವಯ ಸಾಧಿಸಬೇಕು. ಮೇಳ ಯಶಸ್ಸಿಗೆ ವೇದಿಕೆ, ಆಹಾರ, ಸಆರಿಗೆ, ಸಆಂಸ್ಕೃತಿಕ, ಮಾಧ್ಯಮ, ನೀರು ಸರಬರಾಜು ಹಾಗೂ ನೈರ್ಮಲ್ಯ, ಸುರಕ್ಷಾ, ಅಗ್ನಿಶಾಮಕ ಹೀಗೆ ಒಟ್ಟು ೮ ಸಮಿತಿಗಳನ್ನು ರಚಿಸಿ ಕೆಲಸ ಕಾರ್ಯ ಹಂಚಿಕೆ ಮಾಡಿದ್ದು, ಅದರಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಚಾಚು ತಪ್ಪದೆ ಮಾಡಬೇಕು ಎಂದರು.
ಕಲಬುರಗಿ ಮೂರನೇ ರಾಷ್ಟ್ರೀಯ ಮೇಳಕ್ಕೆ ಸಾಕ್ಷಿ: ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನದ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಕೆ. ಅಲಿ ಮಾತನಾಡಿ ೨೦೧೮ ರಿಂದ ಈ ರೀತಿಯ ರಾಷ್ಟ್ರ ಮಟ್ಟದ ಸರಸ್ ಮೇಳ ಆಯೋಜಿಸಲಾಗುತ್ತಿದೆ. ಬೆಂಗಳೂರು, ಬೆಳಗಾವಿಯಲ್ಲಿ ಈಗಾಗಲೆ ಮಾಡಿದ್ದು, ಕಲಬುರಗಿ ಮೂರನೇ ಮೇಳಕ್ಕೆ ಸಾಕ್ಣಿಯಾಗಲಿದೆ. ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಾರಾಟ ಮೇಳ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
23rd February 2025
ಮಲ್ಲಮ್ಮ ನುಡಿ ವಾರ್ತೆ
ಯಾದಗಿರಿ :ಫೆ.22: ಪ್ರಸಕ್ತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದೆ, ಕಾರಣ ಗ್ರಾಮೀಣ ಭಾಗದ ಜನರು ತಮ್ಮಮಕ್ಕಳಿಗೆ ತಪ್ಪದೇ ಗುಣಮಟ್ಟದ ಶಿಕ್ಷಣ ಒದಗಿಸಿ, ಅದರಿಂದ ಮಾತ್ರ ಅವರು ಮುಂದೆ ಗುರಿ ತಲುಪಿ,
ಎಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆ ಕಾಣಲೂ ಸಾಧ್ಯ ಎಂದು ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು. ಜಿಲ್ಲೆಯಹುಣಸಗಿ ತಾಲ್ಲೂಕಿನ ಮುದನೂರ (ಕೆ)ಗ್ರಾಮದ ಶ್ರೀ ದೇವರ ದಾಸಿಮಯ್ಯ ಶಿಕ್ಷಣ ಸಂಸ್ಥೆಯ ಹಮ್ಮಿಕೊಂಡಿದ್ದ ಬೆಳ್ಳಿಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯನ್ನು ನಡೆಸುವುದು
ಒಂದು ಸವಾಲಿನ ಕೆಲಸ,
ಉನ್ನತ ಸಂಸ್ಕಾರಮನೆತನದಲ್ಲಿ ಜನಿಸಿದ ಶಾಂತರಡ್ಡಿ ಚೌದ್ರಿ ಅವರು, ಇಂಜಿನಿಯರ್ ಪದವಿದರರು, ಬೇರೆ ಕಡೆ ಅವರಿಗೆ ಕೆಲಸ ಮಾಡಲು ಲಕ್ಷಾಂತರ ರೂ.ಹಣ ವೇತನ ಸಿಗುತ್ತಿತ್ತು, ಆದರೆ ಅವರು ಶೈಕ್ಷಣಿಕ ಹಿಂದುಳಿದರುವ ತಮ್ಮ ಭಾಗದಲ್ಲಿ ಕನ್ನಡದ ಆಧ್ಯ ವಚನಕಾರ ದೇವರ
ದಾಸಿಮಯ್ಯ ಅವರ ಹುಟ್ಟೂರು ಸಹ ಇದೆ ಗ್ರಾಮವಾಗಿದೆ.ಅವರ ಹೆಸರಿನಲ್ಲಿ 1995ರಲ್ಲಿ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ, ಕನ್ನಡ ಮಾಧ್ಯಮದಲ್ಲಿಹೈಸ್ಕೂಲ್ವರೆಗೆ ವಿಧ್ಯಾರ್ಥಿಗಳಿಗೆ ವಿಧ್ಯಾದಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು
400
ಹೇಳಿದರು.
ಜಿ.ಪಂ ಮಾಜಿಸದಸ್ಯಹೆಚ್.ಸಿ
ಪಾಟೀಲ್ ರಾಜನಕೋಳೂರ
ಮಾತನಾಡಿ,ಯಾವುದೇ ವ್ಯಕ್ತಿ ಸಾಧನೆಮಾಡಬೇಕಾದರೆಮೊದಲು
ಆಸಕ್ತಿ, ಶ್ರದ್ಧೆ, ಛಲ, ನಿರಂತರ ಪರಿಶ್ರಮ ಹೊಂದಿರಬೇಕು, ಆದಿಶೆಯಲ್ಲಿ ಚೌದ್ರಿಯವರು ಅನೇಕ ಕಷ್ಟಗಳ ಮದ್ಯೆ 15 ಕೋಣೆಗಳ ಸುಸಜ್ಜಿತ ಶಾಲಾ ಕಟ್ಟಡವನ್ನು ನಿರ್ಮಾಣ ಮಾಡಿ, ಹಲವಾರು ವಿಧ್ಯಾವಂತರಿಗೆ ಶಿಕ್ಷಕ ಪವಿತ್ರ ಕೆಲಸ ನೀಡುವ ಜೊತೆಗೆ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ, ಇಲ್ಲಿ ಅಭ್ಯಾಸ ಮಾಡಿದ ವಿಧ್ಯಾರ್ಥಿಗಳು ಹಲವಾರು
ಕ್ಷೇತ್ರಗಳಲ್ಲಿ ಗುರಿ ತಲುಪಿ ಶಾಲೆಗೆ ತರಲೀ ಎಂದು ತಿಳಿಸಿದರು.
ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಾಂತರಡ್ಡಿಚೌದ್ರಿಅಧ್ಯಕ್ಷತೆವಹಿಸಿ
ಮಾತನಾಡಿ, ನಾನು ಬದುಕಿನಲ್ಲಿ ಕಷ್ಟಗಳೇ ಬದುಕಿನ ಜೀವಂತ ಲಕ್ಷಣಗಳು ಎಂದು ಅರಿತು ಎಲ್ಲರ ಸಹಕಾರದಿಂದ ಈ ಭಾಗದಲ್ಲಿ ಶೈಕ್ಷಣಿಕ
ಬದಲಾವಣೆಗೆ ನಿರಂತರ ಕೆಲಸ
ಮಾಡುತ್ತಿದ್ದೇನೆ, ಇದರಿಂದ ನನಗೆ ಆತ್ಮತೃಪ್ತಿ ಇದೆ, ನನ್ನ ಬದುಕಿನ ಇನ್ನೊಂದು ಮಹತ್ವದ ಕೆಲಸ ದೇವರ ದಾಸಿಮಯ್ಯ ಕ್ಷೇತ್ರವನ್ನು ಪ್ರವಾಸೋಧ್ಯಮ ಕ್ಷೇತ್ರವನ್ನಾಗಿ ಅಭಿವೃದ್ಧಿಯಾಗಿ ನೋಡುವುದೇನನ್ನಕನಸಾಗಿದೆ, ಜನಪ್ರತಿನಿಧಿಗಳು,ಜಿಲ್ಲಾಡಳಿತ ವಿಶೇಷ ಕಾಳಜಿ ವಹಿಸಿ, ಕೆಲಸ ಮಾಡಿದಾಗ ಮಾತ್ರ ನಮ್ಮ ಗ್ರಾಮ ರಾಜ್ಯದ ಗಮನ ಸೆಳೆಯುತ್ತದೆ ಎಂದುಭಾವುಕರಾಗಿ ತಮ್ಮ ಅಭಿಪ್ರಾಯಗಳನ್ನು
ಹಂಚಿಕೊಂಡರು.
ಇಂದು
ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ ದೇವಾಪೂರದ ಜಡಿ ಶಾಂತಲಿಂಗೇಶ್ವರ ಮಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯರು ಆಶೀರ್ವಚನ ನೀಡಿ, ನಾವೂ ಅನೇಕ ಸಂಘ-ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಕೆಲವರು ಆರಂಭಿಸಿ ಸರ್ಕಾರದಿಂದ ಹಾಗೂ ಖಾಸಗಿ ಸಾಕಷ್ಟು ಹಣ ಸಂಪಾದಿಸಿರುವುದನ್ನು ಕಂಡಿದ್ದೇವೆ. ಆದರೆ ಇಲ್ಲಿ ಚೌದ್ರಿಯವರು ತಮ್ಮ ಸ್ವ- ಂತ 15 ಎಕರೆ ಜಮೀನನ್ನು ಮಾರಾಟ ಮಾಡಿ ಉತ್ತಮ ಶಾಲೆ ನಿರ್ಮಾಣ ಮಾಡಿ, ಎಲ್ಲಾ ವರ್ಗದ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಮೂಡಿಸಿ, ಶಿಕ್ಷಣ ಒದಗಿಸುತ್ತಿರುವ ಕಾರ್ಯ ನಾವೂ ರಾಜ್ಯದಲ್ಲಿ ಬೇರೆಲ್ಲೂ ಕಾಣಲೂ ಸಾಧ್ಯವಿಲ್ಲ ಎಂದು
ನುಡಿದರು.
ಕಾರ್ಯಕ್ರಮದಲ್ಲಿ ರಜತ ಮಹೋತ್ಸವದ ಜ್ಞಾನಸಿರಿಯ ತವನಿಧಿಸ್ಮರಣ ಸಂಚಿಕೆ-2025
ಬಿಡುಗಡೆ ಮಾಡಲಾಯಿತು.
ವೇದಿಕೆ ಮೇಲೆ ಕೋರಿ
ಸಿದ್ದೇಶ್ವರ ಕಂಠಿ ಮಠದ ಸಿದ್ಧ ಚನ್ನಮಲ್ಲಿಕಾರ್ಜುನಸ್ವಾಮಿಜಿ, ಕೂಡ್ಲಿಗಿಯ ಬಾಬಾ ಮಠದ ಮೃತ್ಯುಂಜಯ, ಕೆಂಭಾವಿ ಹಿರೇಮಠದ ಚನ್ನಬಸವ ಸ್ವಾಮಿಜಿ,ಸಣ್ಣಕೆಪ್ಪ ಬಂಡೆಪ್ಪನಳ್ಳಿ, ಬಸಯ್ಯ ಸೋಮಶೇಖರ ಮಠ ಯಾಳಗಿ, ಗಿರಿಧರ
ರಾಜ್ಯ ಶಿವಾಚಾರ್ಯ ಹಿರೇಮಠ
ಮುದನೂರ,
ಬಬ್ದುಗೌಡ, ಸುರೇಶ ಸಜ್ಜನ್, ವಿಶ್ವನಾಥರಡ್ಡಿದರ್ಶನಾಪೂರ, ರಾಜಾ ಮುಕುಂದ ನಾಯಕ, ಪ್ರಕಾಶ ಅಂಗಡಿ, ರವೀಂದ್ರ ಕೊಡೆಕಲ್, ವಿರೇಶ ನಿಷ್ಟೆ, ಜಯಲಲೀತಾ ಪಾಟೀಲ್, ಹಿರಿಯ ಪತ್ರಕರ್ತರಾದ ಮಲ್ಲಿಕಾರ್ಜುನರಡ್ಡಿಹತ್ತಿಕುಣಿ, ಡಿ.ಸಿ ಪಾಟೀಲ್ ಕೆಂಭಾವಿ, ಕೃಷ್ಣಾರೆಡ್ಡಿ, ಮುಖ್ಯಗುರುಗಳಾದ ಮಹೇಶ ತಾತರಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸೇವು ಜಾದವನಿರೂಪಿಸಿದರೆ, ರಮೇಶಹೂವಿನಹಳ್ಳಿಸ್ವಾಗತಿಸಿದರು, ವಿಜಯಕುಮಾರ ಕರೆಕಲ್ ವಂದಿಸಿದರು.
ನಂತರಶಾಲಾವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರನ್ನು ಆಕರ್ಷಿಸಿತು.
4th October 2024
ಮಲ್ಲಮ್ಮ ನುಡಿ ವಾರ್ತೆ
ಮಾದಿಗ ಸಮುದಾಯಕ್ಕಾದ ಅನ್ಯಾಯ ಸರಪಡಿಸಿ : ದಂಡೋರಾ
ವರದಿ M ರಫೀಕ್ ಪಟೇಲ್
ಯಾದಗಿರಿ : ಇತ್ತಿಚೆಗೆ ಹುಣಸಿಗಿ ತಾಲೂಕಿನ ಬಪ್ಪರಗಾ ಗ್ರಾಮದಲ್ಲಿ ಮಾದಿಗ ಸಮಾಜದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಬೇಕು, ಕೃತ್ಯ ಎಸಗಿದ ವ್ಯಕ್ತಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕೆಂದು ಮಾದಿಗ ದಂಡೋರ ರಾಜಾದ್ಯಕ್ಷ ಅಧ್ಯಕ್ಷ ನರಸಪ್ಪ ದಂಡೋರಾ ಒತ್ತಾಯಿಸಿದರು.
ನಗರದ ಹಿರೆ ಅಗತಿಯಿಂದ ಪಾದಯಾತ್ರೆಯ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪ್ರಕರಣ ದಾಖಲಿಸಿ ಒಂದು ತಿಂಗಳು ಕಳೆದರು ಆರೋಪಿ ಬಂದಿಸಿಲ್ಲ, ಡಿಸಿ ಹಾಗೂ ಎಸ್ ಪಿ ಅವರು ಗ್ರಾಮಕ್ಕೆ ಕಾಟಾಚಾರಕ್ಕೆ ಭೇಟಿ ನೀಡಿ ಆರೋಪಿಗಳನ್ನು ರಕ್ಷಣೆ ಮಾಡಿದ್ದಾರೆ. ಯಾವ ಕಾರಣಕ್ಕೆ ಅವರನ್ನು ಬಂಧಿಸಿಲ್ಲಾ ಎಂದು ಎಂದು ಕಿಡಿ ಕಾರಿದರು.
ಕೆ.ಬಿ ವಾಸು ಮಾತನಾಡಿ, ಸಮಾಜಕ್ಕೆ ಅನ್ಯಾಯವಾದರೆ ನಾವು ಸಹಿಸುವುದಿಲ್ಲಾ ಸಮಾಜಕ್ಕೆ ಅನ್ಯಾಯವಾದರೆ ನಾವು ಎಂದು ಸಹಿಸುವುದಿಲ್ಲಾ. ನ್ಯಾಯಕ್ಕಾಗಿ ಹೋರಾಟ ಮಾಡಲು ಯಾವಾಗಲೂ ಸಿದ್ದರಾಗಿದ್ದೇವೆ ಎಂದರು.
ನಾಗಮ್ಮ ಕಟ್ಟಿಮನಿ ಮಾತನಾಡಿ, ಮಾದಿಗ ಸಮಾಜ ಮಗಳಿಗೆ ಅತ್ಯಾಚಾರ ಮಾಡಿದ ಅರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸಿ, ನಾಗರೀಕಸಮಾಜಕ್ಕಾದ ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ತೆಲಾಂಗಣದ ಲತಾ ಮಾದಿಗ ಮಾತನಾಡಿ, ಕರ್ನಾಟಕದ ರಾಜ್ಯದಲ್ಲಿ ಮಾದಿಗ ಸಮಾಜಕ್ಕೆ ಮಹಿಳೆಯರಿಗೆ ಮಾತ್ರ ಬಹಿಷ್ಕಾರ ಹಾಕಿಲ್ಲಾ, ಇದು ನಮ್ಮ ಸಮಾಜಕ್ಕೆ ಬಹಿಷ್ಕಾರ ಹಾಕುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ದಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ರಾಜು ಹದನೂರ್ ಮಾತನಾಡಿ, ಅತ್ಯಾಚಾರಿಗಳನ್ನು ಕೂಡಲೇ ಬಂದಿಸಬೇಕು. ಕುಟುಂಬಕ್ಕೆ ರಕ್ಷಣೆ ನೀಡಬೇಕು. ಈ ಘಟನೆಗಳು ಮರುಕಳಿಸದಂತೆ ಕ್ರಮವಹಿಸಬೇಕು. ಡಿಸಿ ಮತ್ತು ಎಸ್ ಪಿ ಅವರು ಪ್ರತಿಭಟನೆ ಸ್ಥಳಕ್ಕೆ ಆಗಮಿಸುವಂತೆ ಪಟ್ಟು ಹಿಡಿದಿದ್ದರು. ಎಡಿಸಿ ಬಂದು ಆರೋಪಿಗಳನ್ನು ಕೂಡಲೇ ಬಂಧಿಸುವAತೆ ಭರವಸೆ ನೀಡಿದ್ದಾಗ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ನಂದಕೂಮಾರ ಬಾಂಬೇಕರ್ ಮಾತನಾಡಿ, ದಲಿತ, ಶೋಷಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಕೂಡಲೇ ಬಂಧಿಸಿ, ಪ್ರಕರಣ ರಾಜ್ಯಾದ್ಯಂತ ಸುದ್ದಿಯಾದ ಈ ಘಟನೆ ನಡೆದು ಸುಮಾರು ದಿನಗಳು ಕಳೆದರೂ ನಮ್ಮ ಧ್ವನಿ ಸರ್ಕಾರಕ್ಕೆ ಕೇಳಿಸುತ್ತಿಲ್ವಾ, ಅದರ ವಿರುದ್ಧ ಕ್ರಮ ಕೈಗೊಂಡಿಲ್ಲಾ, ಆರೋಪಿಯನ್ನು ಯಾಕೆ ಬಂದಿಸಿಲ್ಲಾ ಉತ್ತರಿಸಿ ಎಂದರು.
ಪ್ರತಿಭಟನಾ ಪಾದಯಾತ್ರೆಯು ಹಿರೆ ಅಸಗಿಯಿಂದ, ಕನಕ ವೃತ್ತ, ಅಂಬೇಡ್ಕರ್ ವೃತ್ತ, ತಹಸೀಲ್ದಾರ ಕಚೇರಿ, ಶಾಸ್ತ್ರೀ ವೃತ್ತದಿಂದ ಸುಭಾಷ್ಚಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.