22nd December 2024
ಸಂಗೊಳ್ಳಿ ರಾಯಣ್ಣ ಕಾಲೇಜಿನ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಕಾರ್ಯ
ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು 2024-25ರ ಶೈಕ್ಷಣಿಕ ಕ್ಷೇತ್ರಕಾರ್ಯಕ್ಕಾಗಿ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅಪ್ಪಣ್ಣ ಜಿರನಾಳ, ಡಾ. ಪ್ರೀತಿ ಪದಪ್ಪಗೊಳ ನೇತೃತ್ವದಲ್ಲಿ ಬೆಳಗಾವಿಯ ಮಹೇಶ್ ಫೌಂಡೇಶನ್ ಗೆ ಭೇಟಿ ನೀಡಿದರು. ಮಹೇಶ್ ಫೌಂಡೇಶನ್ ನ ಮುಖ್ಯಸ್ಥರಾದ ಮಹೇಶ ಜಾದವ್ ಹಾಗೂ ಅಲ್ಲಿನ ಮಕ್ಕಳೊಂದಿಗೆ ಯುವ ಜನಾಂಗದಲ್ಲಿ ಹರಡುತ್ತಿರುವ ಎಚ್. ಐ. ವಿ. ಹಾಗೂ ಮಕ್ಕಳ ಸಮಸ್ಯೆಯ ಕುರಿತು ಚರ್ಚಿಸಿದರು. ಅದನ್ನು ತಡೆಗಟ್ಟುವಲ್ಲಿ ಸಮಾಜದ ಪಾತ್ರ, ಯುವಜನತೆಯ ಸಾಮಾಜಿಕ ಜವಾಬ್ದಾರಿ ಕುರಿತು ಸಂವಾದ ನಡೆಸಿದರು.
ಮಹೇಶ್ ಫೌಂಡೇಶನ್ ನ ಮುಖ್ಯಸ್ಥರಾದ ಮಹೇಶ್ ಜಾದವ್ ತಮ್ಮ ಫೌಂಡೇಶನ್ ನಡೆದು ಬಂದ ದಾರಿ, ಅದರ ಉದ್ದೇಶ, ಸಮಾಜದಲ್ಲಿ ಎಚ್. ಐ. ವಿ. ಮಕ್ಕಳ ಬಗೆಗೆ ಇರುವ ಅಂದು ಮತ್ತು ಇಂದಿನ ಸಮಸ್ಯೆಗಳು, ಒಂದು ಸಂಘವನ್ನು ಕಟ್ಟಿ ಬೆಳೆಸುವಲ್ಲಿ ನಮ್ಮಗಳ ತ್ಯಾಗ, ವಿದ್ಯಾರ್ಥಿಗಳ ಜವಾಬ್ದಾರಿ ಇವುಗಳ ಕುರಿತು ನಮ್ಮೊಂದಿಗೆ ಹಂಚಿಕೊಂಡರು. ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರಕ್ಕಾಗಿ ಸಿದ್ಧ ಮಾಡಿಕೊಂಡು ಬಂದ ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಪಡೆದುಕೋಂಡರು.
ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ:-ಬಿ.ಫೌಜಿಯಾ ತರನ್ನುಮ್
ಶಿಕ್ಷಣದಿಂದ ಮಾತ್ರ ಎಲ್ಲಾ ಕ್ಷೇತ್ರಗಳಲ್ಲಿ ಬದಲಾವಣೆ ಸಾಧ್ಯ :ಶಾಸಕ ತುನ್ನೂರ
ಜನಪದ ಸಾಹಿತ್ಯದ ತಾಯಿ ಬೇರು: ಹಮೀದಾ ಬೇಗಂ ದೇಸಾಯಿ ಪೃಥ್ವಿ ಫೌಂಡೇಶನ್ ದಿಂದ " ಜಾನಪದ ಸಂಭ್ರಮ" ಕಾರ್ಯಕ್ರಮ
ಗಣಿತ ವಿಜ್ಞಾನದ ತಾಯಿ ಬೇರು : ಪ್ರಾಚಾರ್ಯ ಎಂ. ಜಿ. ಹೆಗಡೆ ಗಣಿತ ವಿಜ್ಞಾನದ ತಾಯಿ ಬೇರು. ವೈಜ್ಞಾನಿಕ ಸಂಶೋಧನೆಯು ಗಣಿತದ ಮೇಲೆಯೇ ಅವಲಂಬಿಸಿದೆ ಎಂದು ಪ್ರಾಚಾರ್ಯ ಎಂ. ಜಿ. ಹೆಗಡೆ ಅವರು ಅಭಿಪ್ರಾಯಪಟ್ಟರು.