Vijaya Karnataka(MYSORE)
News

78ನೇ ಸ್ವಾತಂತ್ರೋತ್ಸವ ಆಚರಣೆ

17th August 2024

ಗಾವಡಗೆರೆಹೋಬಳಿಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗಾವಡಗೆರೆ ನಾಡಕಚೇರಿಯಲ್ಲಿ ಮೂವರು ಯೋಧರು ಹಾಗೂ ನೀಟ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಯನ್ನು ಸನ್ಮಾನಿಸಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಉಪ ತಹಸೀಲ್ದಾರ್ ಅರುಣ್ ಕುಮಾರ್ ನೆರವೇರಿಸಿದರು ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕ ಹೇಮಂತ್ ಗ್ರಾಮ ಆಡಳಿತ ಅಧಿಕಾರಿಗಳಾದ ವಿಜಯ್ ಕುಮಾರ್, ಪಲ್ಲವಿ, ಚೈತ್ರ, ಶ್ರೀವತ್ಸ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು. ಕರ್ನಾಟಕ ಪಬ್ಲಿಕ್ ಶಾಲೆ:- ಗಾವಡಗೆರೆ ಪದವಿ ಪೂರ್ವ ಕಾಲೇಜಿನ ಧ್ವಜಾರೋಹಣವನ್ನು ಪ್ರಾಂಶುಪಾಲ ಜನಾರ್ಧನ್ ನೆರವೇರಿಸಿದರು ಈ ಸಂದರ್ಭದಲ್ಲಿ ಸಿಡಿಸಿ ಉಪಾಧ್ಯಕ್ಷ ಹೊನ್ನಪ್ಪರವ ಕಾಳಿಂಗೆ ಸಿಡಿಸಿ ಸದಸ್ಯರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು. ಹಿರೀಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ:- 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾಮ ಅಧ್ಯಕ್ಷೆ ರುಕ್ಮಿಣಿ ನೆರವೇರಿಸಿದರು ಸಂದರ್ಭದಲ್ಲಿ ಪಿಡಿಒ ಶಿಲ್ಪಾಶ್ರೀ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ನೌಕರರು ಹಾಜರಿದ್ದರು. ಸರ್ಕಾರಿ ಪ್ರೌಢಶಾಲೆ:- ಇಲ್ಲಿನ ದ್ವಜಾರೋಹಣವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪುಟ್ಟರಾಜ ನೆರವೇರಿಸಿದರು. ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಸರಳ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು. ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಳೆದ ಫಲಿತಾಂಶದಲ್ಲಿ ಹೆಚ್ಚು ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ :-ಇಲ್ಲಿನ ಧ್ವಜಾರೋಹಣವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಂದ್ರ ನೆರವೇರಿಸಿದರು ಮುಖ್ಯ ಶಿಕ್ಷಕ ಮಹೇಶ್ ಸಹ ಶಿಕ್ಷಕ ರಮೇಶ್, ಕವಿತಾ, ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ:- ಇಲ್ಲಿನ ಧ್ವಜಾರೋಹಣವನ್ನು ವೈದ್ಯಾಧಿಕಾರಿಗಳಾದ ಡಾ. ಶ್ರೀಕಾಂತ್ ನೆರವೇರಿಸಿದರು ಈ ಸಂಧರ್ಭದಲ್ಲಿ ಇಲಾಖೆಯ ನೌಕರರು ಹಾಜರಿದ್ದರು. ಅನುದಾನಿತ ವೇಣುಗೋಪಾಲ ವಿದ್ಯಾ ಸಂಸ್ಥೆ:- ಇಲ್ಲಿನ ಧ್ವಜಾರೋಹಣವನ್ನ ಸಂಸ್ಥೆ ಅಧ್ಯಕ್ಷ ವಿಶ್ವೇಶ್ವರಯ್ಯ ನೆರವೇರಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರು ಗ್ರಾಮ ಪಂಚಾಯಿತಿ ಸದಸ್ಯರುಗಳು ಸಹ ಶಿಕ್ಷಕರು ಗ್ರಾಮದ ಮುಖಂಡರು ಹಾಜರಿದ್ದರು